ಸುಳ್ಯ :ಧರ್ಮ ಸಂಸ್ಕಾರ ಮಾನವ ಜನಾಂಗ ಗೊತ್ತುಪಡಿಸಿದ ಒಂದು ಆಧ್ಯಾತ್ಮಿಕ ವಿಚಾರವೆಂದು ಅಜ್ಜಾ ವರ ಚೈತನ್ಯ ಸೇವಾ ಆಶ್ರಮದ ಶ್ರೀ ಯೋಗೇಶ್ವರನಂದ ಸರಸ್ವತಿ ಸ್ವಾಮೀಜಿ ಅವರು ಹೇಳಿದರು.
ಅವರ ಕೃತಿ ಪರಿವರ್ತನೆ ಅರೆಭಾಷೆಗೆ ಭಾಷಾಂತರ ಕೊಂಡಿದ್ದು ಅದರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ ದರು. ಮನೆಯ ಮಾತು ಸಂಸ್ಕಾರ ಅನ್ಯೋನ್ಯತೆ ಯನ್ನು ನಾವು ಯಾವತ್ತು ಕಡೆಗಣಿಸಬಾರದು .ಧರ್ಮ ನೀತಿ ಸಂಸ್ಕಾರ ಎಲ್ಲವೂ ಸಾಹಿತ್ಯಗಳಲ್ಲಿ ಅಡಕವಾಗಿವೆ. ನಮ್ಮ ಏಳಿಗೆಗೆ ಗುರುಹಿರಿಯರ ಆಶೀರ್ವಾದ ಮುಖ್ಯ. ಭಾಷೆ ಒಂದು ಮಾಧ್ಯಮ .ಪ್ರತಿಯೊಂದು ಭಾಷೆ ಮುಖ್ಯವಾಗಿದೆ. ಕಲೆ ಸಾಹಿತ್ಯ ಸಂಸ್ಕೃತಿಗೆ ಜಾತಿ ,ವರ್ಗ, ಧರ್ಮದ ಭೇದವಿಲ್ಲ ಎಂದು ಅವರು ಹೇಳಿದರು.

ಉದಯೋನ್ಮುಖ ಸಾಹಿತಿ ಯೋಗೀಶ್ ಹೊಸ ಯೋಳಿಕೆಯವರು
ಸ್ವಾಮೀಜಿಯವರ ಕೃತಿ ಪರಿವರ್ತನೆ ಯನ್ನು ಅರೆ ಭಾಷೆಗೆ ಭಾಷಾಂತರ ಗೊಳಿಸಿದ್ದು ಅದನ್ನು ವೈದೆ ಸಾಯಿ ಗೀತ ಬಿಡುಗಡೆಗೊಳಿಸಿದರು. ನಂತರ ಅವರು ಮಾತನಾಡಿ
ಅವರು ಪ್ರತಿಯೊಂದು ಭಾಷೆಯ ಸಾಹಿತ್ಯವನ್ನು ನಾವು ಗೌರವಿಸಬೇಕು. ನಾವು ಬೆಳೆಯುತ್ತಾ ನಮ್ಮ ಹೃದಯದ ಭಾಷೆಯನ್ನು ಹೆಚ್ಚು ಗೌರವಿಸು ಸುತ್ತೆವೆ ಸಾಹಿತ್ಯಗಳನ್ನು ಓದುವುದರಿಂದ ನಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಅವರು ಹೇಳಿದರು.

ಯೋಗೀಶ್ ಹೊಸಯೋಳಿ ಕೆ ಮಾತನಾಡಿ ನಾವು ಸಮಾಜಕ್ಕೆ ಕೊಡುಗೆ ನೀಡಬೇಕು ನಮ್ಮಿಂದ ಸಮಾಜಕ್ಕೆ ಕೊಡುಗೆ ನೀಡಲು ಸಾಧ್ಯವಾಗದಿದ್ದರೆ ಸಮಾಜಕ್ಕೆ ನಾವು ಕೆಟ್ಟದು ಮಾಡಬಾರದು ಎಂದು ಹೇಳಿದರು. ಸಾಹಿತಿ ಭೀಮರಾವ್ ವಾಸ್ಟರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಪ್ರೊಫೆಸರ್ ಅನಿಲ್ ಬಿ ವಿ, ಪ್ರೊಫೆಸರ್ ರೇಖಾ, ಚೈತನ್ಯ ಸೇವಾಶ್ರಮದ ಪ್ರಣವಿ ಇತರರು ಉಪಸ್ಥಿತರಿದ್ದರು