ಬೆಂಗಳೂರು: ಮಾದಕ ವಸ್ತುಗಳ ಜಾಲ ಪ್ರಕರಣದಲ್ಲಿ ಚಾಮರಾಜಪೇಟೆ ವಿಧಾ ನ ಸಭಾ ಕ್ಷೇತ್ರದ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರಿಗೂ ನಂಟಿದೆ ಎಂದು ಆರೋಪಿಸಿದ್ದ ಪ್ರಶಾಂತ್ ಸಂಬರಗಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಪೊಲೀಸರಿಗೆ ನಿರ್ದೇಶಿಸಿರುವ ನಗರದ 24 ನೇ ಎಸಿಎಂಎಂ ನ್ಯಾಯಾಲಯ, ಪ್ರಕರಣ ಸಂಬಂಧ ಜನವರಿ 21 ರಂದು ವಿಚಾರಣೆಗೆ ಹಾಜರಾಗಲು ಸಂಬರಗಿಗೆ . ಸೂಚಿಸಿದೆ.
ಪ್ರಶಾಂತ್ ಸಂಬರಗಿ ತಮ್ಮ ವಿರುದ್ಧ ಅನಗತ್ಯ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ.ಈ ಸಂಬಂಧ ಚಾಮ ರಾಜಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದರೂ ಕ್ರಮಕ್ಕೆ ಮುಂದಾ ಗಿಲ್ಲ.ಆದ್ದರಿಂದ ಅವರ ವಿರುದ್ಧ ಕಾನೂನು ಪ್ರಕಾರ ಶಿಸ್ತುಕ್ರಮ ಕೈಗೊಳ್ಳಲು ಸೂಚನೆ ನೀಡಬೇಕು ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ನಗರದ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ದೂರಿನ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾ ಲಯ , ಆರೋಪಿ ಪ್ರಶಾಂತ್ ಸಂಬರಗಿ ವಿರುದ್ಧ ಐಪಿಸಿ 499 ( ಮಾನ ಹಾನಿ ) ಹಾಗೂ 500 ( ಮಾನನಷ್ಟಕ್ಕೆ ಶಿಕ್ಷೆ ) ಸೆಕ್ಷನ್ ಗಳ ಅಡಿ ಮೊಕ್ಕದಮೆ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ.